ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ‘ವಿದ್ಯಾದೀವಿಗೆ’ ಯೋಜನೆಗಳ ನೂತನ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ( Pradeep Shetty Karikatte) ಅವರು ಆಯ್ಕೆಯಾಗಿದ್ದಾರೆ.
ಸಂಘಟನಾ ಚತುರರಾಗಿರುವ ಪ್ರದೀಪ್ ಶೆಟ್ಟಿ ಅವರು ಈ ಹಿಂದೆ ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಜೊತೆಗೆ ಬೈಂದೂರು ಉತ್ಸವ, ಕುಂದಾಪುರ ಕನ್ನಡ ಪ್ರತಿಷ್ಠಾನದಂತಹ ಪ್ರಮುಖ ಕಾರ್ಯಕ್ರಮಗಳ ಸಂಯೋಜಕರಾಗಿಯೂ ಅವರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ, ಇವರು ಬೈಂದೂರು ಬಂಟರ ಯಾನೆ ನಾಡವರ ಸಂಘದ ಯುವ ವೇದಿಕೆಯ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: ಜುಲೈ 31 ಕಡೆಯ ದಿನ
ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ ಶೈಕ್ಷಣಿಕ ಪ್ರೋತ್ಸಾಹದಾಯಕ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 31, 2026 ಕೊನೆಯ ದಿನವಾಗಿದೆ ಎಂದು ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತಾ ಮಾನದಂಡಗಳು ಈ ಕೆಳಗಿನಂತಿವೆ:
ಪ್ರತಿಭಾ ಪುರಸ್ಕಾರ ಯೋಜನೆ: 2026ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 95% ಕ್ಕಿಂತ ಅಧಿಕ ಅಂಕ ಪಡೆದ ಬಂಟ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾದೀವಿಗೆ ಯೋಜನೆ: ಶೇ. 60% ಕ್ಕಿಂತ ಅಧಿಕ ಅಂಕ ಪಡೆದು ಉತ್ತೀರ್ಣರಾದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ‘ವಿದ್ಯಾದೀವಿಗೆ’ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
kundapura yuva buntara sangha pradeep shetty karikatte vidyadeevige


