Author name: Bunts World

Malini J Shetty selected as Vice President of the Udupi District BJP Mahila Morcha for the second time

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆಯಾಗಿ ಮಾಲಿನಿ ಜೆ. ಶೆಟ್ಟಿ ಎರಡನೇ ಬಾರಿಗೆ ಆಯ್ಕೆ!

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾ ಉಪಾಧ್ಯಕ್ಷೆಯಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪ್ರಮುಖ ನಾಯಕಿ ಮಾಲಿನಿ ಜೆ. ಶೆಟ್ಟಿ ಅವರು ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಮಾಲಿನಿ ಜೆ. ಶೆಟ್ಟಿ ಅವರು ಈ ಹಿಂದೆ ನೀರೆ ಕಣಂಜಾರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆಯಾಗಿ, ಕಾರ್ಕಳ ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ಹಾಗೂ ಅಧ್ಯಕ್ಷೆಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಮತ್ತು […]

Introduce the heritage of the Sangh to children and instill a spirit of service Praveen Bhoja Shetty

ಮಕ್ಕಳಿಗೆ ಸಂಘದ ಪರಂಪರೆ ಪರಿಚಯಿಸಿ, ಸೇವಾ ಮನೋಭಾವ ಬೆಳೆಸಿ: ಪ್ರವೀಣ್ ಭೋಜ ಶೆಟ್ಟಿ

ಮುಂಬಯಿ: ಮಕ್ಕಳು ಬಂಟರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರತೀ ಬಾರಿ ಭಾಗವಹಿಸಲು ಸಾಧ್ಯವಾಗದಿದ್ದರೂ, ಪಾಲಕರು ಅವರಿಗೆ ಶಿಕ್ಷಣದ ಜೊತೆಗೆ ಸಂಘದ ಚಟುವಟಿಕೆಗಳು, ಸೇವಾ ಕಾರ್ಯಗಳು ಹಾಗೂ ಸಂಘದ ಉದ್ದೇಶಗಳ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ಭವಿಷ್ಯದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ಸಮಾಜ ಸೇವೆಗೆ ಕೈಜೋಡಿಸಲು ಸಾಧ್ಯವಾಗುತ್ತದೆ ಎಂದು ಶತಮಾನದತ್ತ ಸಾಗುತ್ತಿರುವ ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಹೇಳಿದರು. ಜೂನ್ 28ರಂದು ನಾಲಾಸೋಪಾರ ಪಶ್ಚಿಮದ ಗ್ಯಾಲಕ್ಸಿ ಹೋಟೆಲ್ ಸಭಾಂಗಣದಲ್ಲಿ

Dr Chethan Shetty Kovadi elected as new president of Kundapur Taluk Youth Bunts Sangha

ಕುಂದಾಪುರ ತಾಲೂಕು ಯುವ ಬಂಟರ ಸಂಘಕ್ಕೆ ಡಾ. ಚೇತನ್ ಶೆಟ್ಟಿ ಕೋವಾಡಿ ನೂತನ ಅಧ್ಯಕ್ಷರಾಗಿ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಜೂನ್ 27ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ ನಡೆದ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಸ್ತುತ ಡಾ. ಚೇತನ್ ಶೆಟ್ಟಿ ಕೋವಾಡಿ ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಯೋಜನಾಧಿಕಾರಿಯಾಗಿಯೂ

Blessings of Guru Seniors with skill development is a stepping stone to success Bharat G KumarBlessings of Guru Seniors with skill development is a stepping stone to success Bharat G Kumar

ಕೌಶಲ್ಯಾಭಿವೃದ್ಧಿಯೊಂದಿಗೆ ಗುರು-ಹಿರಿಯರ ಆಶೀರ್ವಾದ ಯಶಸ್ಸಿನ ಮೆಟ್ಟಿಲು: ಭರತ್ ಜಿ. ಕುಮಾರ್

ಉಡುಪಿ: ಇಂದಿನ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದ್ದು, ಪದವಿ, ಅಂಕ ಹಾಗೂ ಪ್ರಮಾಣಪತ್ರಗಳ ಜೊತೆಗೆ ಅಭ್ಯರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಜೊತೆಗೆ ತಾವು ನಡೆದು ಬಂದ ದಾರಿಯ ಸ್ಮರಣೆ ಹಾಗೂ ಗುರು-ಹಿರಿಯರ ಆಶೀರ್ವಾದವನ್ನು ಮರೆಯದೆ ಸಾಗಿದರೆ ಯಶಸ್ಸು ಖಚಿತ ಎಂದು ನಿಟ್ಟೆ ತಂತ್ರಜ್ಞಾನ ಸಂಸ್ಥೆಯ ಸಮಲೋಚನೆ, ಕಲ್ಯಾಣ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಭರತ್ ಜಿ. ಕುಮಾರ್ ಹೇಳಿದರು. ಅವರು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್

CA Final Pass in First Attempt Dr B B Hegde Colleges Shravya Shettys Achievement

ಚೊಚ್ಚಲ ಪ್ರಯತ್ನದಲ್ಲೇ ಸಿ.ಎ. ಫೈನಲ್ ಪಾಸ್: ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯ ಶೆಟ್ಟಿ ಸಾಧನೆ

ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ 2026ರ ಚಾರ್ಟರ್ಡ್ ಅಕೌಂಟೆನ್ಸಿ (ಸಿ.ಎ.) ಫೈನಲ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲೇ ಸಿ.ಎ. ಕೋರ್ಸ್‌ನ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿ.ಎ. ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವ ಶ್ರಾವ್ಯ ಅವರ

International Yoga Day celebrated at Sujnan Educational Trust

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪುರ:”ಆಧುನಿಕ ಜಗತ್ತಿನ ಒತ್ತಡದ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಅತ್ಯಗತ್ಯ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪ್ರಖ್ಯಾತ ವೈದ್ಯರಾದ ಡಾ. ದೀಕ್ಷಾ ಶೆಣೈ ಅವರು ನುಡಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ

Priority for economic and educational progress of the Bunts community – Rajendra V Shetty

ಬಂಟ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಆದ್ಯತೆ – ರಾಜೇಂದ್ರ ವಿ. ಶೆಟ್ಟಿ

ಹುಬ್ಬಳ್ಳಿ: ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಬಂಟ ಸಮುದಾಯದ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವುದಾಗಿ ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷ ರಾಜೇಂದ್ರ ವಿ. ಶೆಟ್ಟಿ ತಿಳಿಸಿದ್ದಾರೆ. ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ‘ಬಂಟರ ಬಾಂಧವ್ಯ’ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. “ಸಮಾಜದ ಸಾಮಾನ್ಯ ಸದಸ್ಯನಾಗಿ ಆರಂಭಗೊಂಡ ನನ್ನ ಪಯಣ ಇಂದು ಸಂಘದ ಅಧ್ಯಕ್ಷ ಸ್ಥಾನಕ್ಕೆ ತಲುಪಿರುವುದು ನನ್ನ

Pune Bunts Sangha to Celebrate International Yoga Day on June 21

ಪುಣೆ ಬಂಟರ ಸಂಘದಿಂದ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಪುಣೆ: ಇಲ್ಲಿನ ಪ್ರಮುಖ ಸಾಮಾಜಿಕ ಸಂಸ್ಥೆಯಾದ ಪುಣೆ ಬಂಟರ ಸಂಘದ ಸಮಾಜ ಕಲ್ಯಾಣ, ಕಲ್ಪವೃಕ್ಷ ಹಾಗೂ ಕ್ರೀಡಾದಾತ ಯೋಜನೆಗಳ ಆಶ್ರಯದಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9:00 ಗಂಟೆಗೆ ಪುಣೆಯ ಬಂಟರ ಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ಈ ವಿಶೇಷ ಯೋಗ ಕಾರ್ಯಕ್ರಮ ನಡೆಯಲಿದೆ. ಪ್ರಸಿದ್ಧ ಯೋಗ ತರಬೇತುದಾರೆ ಜ್ಯೋತಿ ಶೆಟ್ಟಿ ಅವರು ಯೋಗದಿಂದ ದೇಹ ಮತ್ತು ಮನಸ್ಸಿಗೆ ಆಗುವ ಪ್ರಯೋಜನಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪುಣೆಯ ‘ಶೆಟ್ಟಿ ಯೋಗ

Rishab Shetty as Brand Ambassador for Karnataka Tourism? Cabinet Likely to Approve Soon

ಕರ್ನಾಟಕ ಪ್ರವಾಸೋದ್ಯಮಕ್ಕೆ ಹೊಸ ಕಳೆ: ಕರಾವಳಿ-ಮಲೆನಾಡು ರಾಯಭಾರಿ ಆಗಲಿದ್ದಾರಾ ರಿಷಬ್ ಶೆಟ್ಟಿ?

ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮ ಪ್ರಚಾರದ ರಾಯಭಾರಿಯಾಗಿ ‘ಕಾಂತಾರ’ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಷಬ್ ಶೆಟ್ಟಿ ಅವರ ಬೆನ್ನು ತಟ್ಟಿರುವ ಫೋಟೋಗಳು ಸದ್ಯ ಸಾಮಾಜಿಕ

Embraer Legacy 650 private plane added to Dr K Prakash Shetty s family

ಡಾ. ಕೆ. ಪ್ರಕಾಶ್ ಶೆಟ್ಟಿ ಕುಟುಂಬಕ್ಕೆ ‘ಎಂಬ್ರೇಯರ್ ಲೆಗಸಿ 650’ ಖಾಸಗಿ ವಿಮಾನ ಸೇರ್ಪಡೆ

ಮಂಗಳೂರು: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಉದ್ಯಮ ಪಯಣಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರ್ಪಡೆಯಾಗಿದ್ದು, ಅಮೆರಿಕದಿಂದ ತರಿಸಲಾದ ಅತ್ಯಾಧುನಿಕ 14 ಆಸನಗಳ ‘ಎಂಬ್ರೇಯರ್ ಲೆಗಸಿ 650’ (Embraer Legacy 650) ಖಾಸಗಿ ವಿಮಾನವನ್ನು ಎಂಆರ್‌ಜಿ ಕುಟುಂಬಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ

Scroll to Top