Author name: Bunts World

Amarnath Shetty a symbol of transparent governance is the candidate for the post of Honorary Secretary of Heggunje

ಪಾರದರ್ಶಕ ಆಡಳಿತದ ಪ್ರತೀಕ ಅಮರನಾಥ್ ಶೆಟ್ಟಿ ಹೆಗ್ಗುಂಜೆ ಗೌರವ ಕಾರ್ಯದರ್ಶಿ ಅಭ್ಯರ್ಥಿ

ಗೌರವದ ವ್ಯಕ್ತಿತ್ವಕ್ಕೆ ಗೌರವ ಕಾರ್ಯದರ್ಶಿ ಹುದ್ದೆ. ಈ ಸಲದ ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಡಾ. ದೀಪಕ್ ಶೆಟ್ಟರ ಟೀಮ್‌ನಲ್ಲಿ ಗೌರವ ಕಾರ್ಯದರ್ಶಿ ಹುದ್ದೆಗೆ ಅಮರನಾಥ್ ಶೆಟ್ಟಿ ಹೆಗ್ಗುಂಜೆ ಅವರು ಸ್ಪರ್ಧಿಸುತ್ತಿದ್ದಾರೆ. ಅಮರನಾಥ್ ಶೆಟ್ಟರ ಬಗ್ಗೆ ವಿಶೇಷ ಪರಿಚಯ ಬೇಕಿಲ್ಲ ಯಾಕೆಂದರೆ ಹಿರಿಯರೊಂದಿಗೆ ಗೌರವದಿಂದ, ಕಿರಿಯರೊಂದಿಗೆ ಆತ್ಮೀಯತೆಯಿಂದ ಬೆರತು ಸುಪರಿಚಿತರಾಗಿದ್ದಾರೆ. ಕರಾವಳಿಯ ಸಂಘ ಸಂಸ್ಥೆಯ ಪೋಷಕ ಶಕ್ತಿ ಅಮರನಾಥ ಶೆಟ್ಟರು, ನೂರಾರು ಜನರ ಸಂಕಷ್ಟಕ್ಕೆ ಸ್ಪಂದಿಸಿದವರು. ಯಾರನ್ನೂ ನೋಯಿಸದ, ಎಲ್ಲರ ಸಂತೋಷ ಮತ್ತು ಸಂಕಷ್ಟಕ್ಕೆ ಸದಾ ಸ್ಪಂದಿಸುವ […]

The Path of Achievement of Prof Dr Kothadi Umesh Shetty

ಶೈಕ್ಷಣಿಕ ಕ್ರಾಂತಿಯ ಹರಿಕಾರ: ಪ್ರೊ| ಡಾ| ಕೊತ್ತಾಡಿ ಉಮೇಶ್ ಶೆಟ್ಟಿ ಅವರ ಸಾಧನೆಯ ಪಥ

ಕುಂದಾಪುರ: ಗ್ರಾಮೀಣ ಭಾಗದ ಹಿನ್ನೆಲೆಯಿಂದ ಬಂದು, ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ನಿರಂತರ ಸೇವೆ ಸಲ್ಲಿಸಿ, ಇಂದು ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ಯಶಸ್ಸಿನ ಉತ್ತುಂಗಕ್ಕೆ ಮುನ್ನಡೆಸುತ್ತಿರುವ ಹೆಗ್ಗಳಿಕೆ ಪ್ರಾಂಶುಪಾಲರಾದ ಪ್ರೊ| ಡಾ| ಕೊತ್ತಾಡಿ ಉಮೇಶ್ ಶೆಟ್ಟಿ ಅವರದ್ದಾಗಿದೆ. ಕೇವಲ ಬೋಧನೆಗಷ್ಟೇ ಸೀಮಿತವಾಗದೆ ಉತ್ತಮ ಸಂಶೋಧಕರಾಗಿ, ಪಠ್ಯಪುಸ್ತಕಗಳ ಲೇಖಕರಾಗಿ ಹಾಗೂ ಯಶಸ್ವಿ ಆಡಳಿತಗಾರರಾಗಿ ಅವರು ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಡಾಕ್ಟರೇಟ್‌ವರೆಗೆ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ

Sampath shetty krishna prasad foundation seva sankalpa 1

ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ವತಿಯಿಂದ ₹93.64 ಲಕ್ಷ ಮೌಲ್ಯದ ನೆರವು ವಿತರಣೆ

ಕುಂದಾಪುರ: ಪ್ರತಿಭೆ, ಸಾಮರ್ಥ್ಯ ಹಾಗೂ ಕಲಿಯುವ ಆಸಕ್ತಿ ಹೊಂದಿರುವವರಿಗೆ ಇಂದಿನ ಸಮಾಜದಲ್ಲಿ ಆರ್ಥಿಕ ಹಿನ್ನೆಲೆ ಅಡ್ಡಿಯಾಗುವುದಿಲ್ಲ. ಸಾರ್ವಜನಿಕ ಜೀವನದಲ್ಲಿ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟೇಶ್ವರದ ಯುವ ಮೆರಿಡಿಯನ್ ಗ್ರ್ಯಾಂಮಿ ಬಾಲ್‌ರೂಮ್‌ನಲ್ಲಿ ಭಾನುವಾರ ನಡೆದ ‘ಸೇವಾ ಸಂಕಲ್ಪ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಹಾಗೂ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್, ವಂಡಾರು-ಬ್ರಹ್ಮಾವರ ವತಿಯಿಂದ

Molahalli dinesh hegde jayarathna trust scholarship programme

ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕುಂದಾಪುರ: ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ) ಮೊಳಹಳ್ಳಿ ವತಿಯಿಂದ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮವು ಬಿದ್ಕಲ್‌ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು.

Election of new office bearers of Hubli-Dharwad Buntara Sangha for the year 2026-28

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ವಿ. ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೇ 28 ರಂದು ಸಂಘದ ಸಭಾಂಗಣದಲ್ಲಿ ಹಾಲಿ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷರಾಗಿ ಸುಧೀರ್ ಜೆ. ಶೆಟ್ಟಿ ಹಾಗೂ ಶ್ರೀನಿವಾಸ ಶೆಟ್ಟಿ (ಧಾರವಾಡ), ಕಾರ್ಯದರ್ಶಿಯಾಗಿ ರತ್ನಾಕರ್ ಎಂ. ಶೆಟ್ಟಿ (ಕರಾವಳಿ ಕ್ಯಾಟರ್ಸ್),

KCET Results Students of Sujnan Educational Trust Kundapur achieve excellent results at the state level

ಕೆ.ಸಿ.ಇ.ಟಿ ಫಲಿತಾಂಶ: ಕುಂದಾಪುರದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನ ವಿದ್ಯಾರ್ಥಿಗಳಿಂದ ರಾಜ್ಯಮಟ್ಟದಲ್ಲಿ ಶ್ರೇಷ್ಠ ಸಾಧನೆ

ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಜ್ಯಮಟ್ಟದ ಕೆ.ಸಿ.ಇ.ಟಿ (KCET) ಪರೀಕ್ಷೆಯಲ್ಲಿ ಕುಂದಾಪುರದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಏಪ್ರಿಲ್ 23 ಮತ್ತು 24 ರಂದು ನಡೆದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯಲ್ಲಿ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಜ್ಞಾನ ನೀಟ್‌ ಅಕಾಡೆಮಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Congratulations to Rajendra V Shetty – Honored by the Advisory Committee of Hubli-Dharwad Bunts Sangha

ರಾಜೇಂದ್ರ ವಿ. ಶೆಟ್ಟಿ ಅವರಿಗೆ ಅಭಿನಂದನೆಗಳ ಮಹಾಪೂರ – ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಸಲಹಾ ಸಮಿತಿಯಿಂದ ಗೌರವ

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದಲ್ಲಿ ಜೂನ್ 6ರಂದು ನಡೆದ ಪದಾಧಿಕಾರಿಗಳ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಂದ್ರ ವಿ. ಶೆಟ್ಟಿಯವರನ್ನು ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಲಹಾ ಸಮಿತಿಯ ಸದಸ್ಯರು, ರಾಜೇಂದ್ರ ವಿ. ಶೆಟ್ಟಿಯವರ ನಾಯಕತ್ವದಲ್ಲಿ ಸಂಘವು ಮತ್ತಷ್ಟು ಅಭಿವೃದ್ಧಿಯ ಪಥದಲ್ಲಿ ಸಾಗಲಿ ಹಾಗೂ ಸಮಾಜ ಸೇವೆಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಸಂಘದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳು ಇನ್ನಷ್ಟು

Unprecedented achievement of a student from Barkur in the 2025-26 CET exam

2025-26ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಬಾರ್ಕೂರಿನ ವಿದ್ಯಾರ್ಥಿಯ ಅಭೂತಪೂರ್ವ ಸಾಧನೆ

2025-26ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಬಾರ್ಕೂರಿನ ಪ್ರತಿಭಾವಂತ ವಿದ್ಯಾರ್ಥಿ ಸಾರ್ಥಕ್ ಆರ್. ಶೆಟ್ಟಿ ಅವರು ರಾಜ್ಯ ಮಟ್ಟದಲ್ಲಿ 26ನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಸಾರ್ಥಕ್ ಅವರು ಬಾರ್ಕೂರಿನ ಶಿಕ್ಷಕ ದಂಪತಿಗಳಾದ ಶ್ರೀಮತಿ ವನಜ ಶೆಟ್ಟಿ ಹಾಗೂ ಶ್ರೀ ಹಿಮಕರ ಶೆಟ್ಟಿ ಅವರ ಮೊಮ್ಮಗರಾಗಿದ್ದು, ಶ್ರೀಮತಿ ದೀಪ್ತಿ ಆರ್. ಶೆಟ್ಟಿ ಮತ್ತು ಶ್ರೀರಾಮಕೃಷ್ಣ ಶೆಟ್ಟಿ ಅವರ ಪುತ್ರ ಹಾಗೂ ದೀಪಕ್ ಶೆಟ್ಟಿ ಅವರ ಅಳಿಯರಾಗಿದ್ದಾರೆ. ಸಿಇಟಿ

Anna Prasadam Hotel A delicious journey on the highway

ಅನ್ನ ಪ್ರಸಾದಂ: ಹೆದ್ದಾರಿಯಲ್ಲೊಂದು ರುಚಿಯಾದ ಪಯಣ

ಹಾಸನ : ಕರಾವಳಿ ಭಾಗದಿಂದ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೊಂದು ಗುಡ್‌ನ್ಯೂಸ್‌ ಇಲ್ಲಿದೆ. ನೆಲಮಂಗಲದಿಂದ ಹಾಸನಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಚೆನ್ನರಾಯಪಟ್ಟಣದಲ್ಲಿ ರವಿತೇಜ್‌ ಶೆಟ್ಟಿ ಮಾರಣಕಟ್ಟೆ ಯವರ ಮಾಲೀಕತ್ವದ “ಅನ್ನ ಪ್ರಸಾದಂ” ಮಲ್ಟಿ ಕ್ಯುಸಿನ್ ಫ್ಯಾಮಿಲಿ ವೆಜ್ ರೆಸ್ಟೋರೆಂಟ್ ಶುಭಾರಂಭಗೊಂಡಿದ್ದು, ರುಚಿಯಿಂದಲೇ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಚೆನ್ನರಾಯಪಟ್ಟಣದ ಬರ್ಗೂರು ಹ್ಯಾಂಡ್ ಪೋಸ್ಟ್ ಬಳಿಯಲ್ಲಿರುವ ಅನ್ನ ಪ್ರಸಾದಂ ಹೋಟೆಲ್, ಕೇವಲ ಹಸಿವು ನೀಗಿಸುವ ಜಾಗವಷ್ಟೇ ಅಲ್ಲಾ, ಅದೊಂದು ಶುದ್ಧ ಸಸ್ಯಾಹಾರಿ ರುಚಿಯ ಸ್ವರ್ಗವಾಗಿತ್ತು. ಹೋಟೆಲ್ ಪ್ರವೇಶಿಸುತ್ತಿದ್ದಂತೆ “ನಂದಿನಿ ತುಪ್ಪದ

Buntara Sangha Bangalore Election - Kanti Shetty to contest against Dr Deepak Shetty

ಬಂಟರ ಸಂಘ ಬೆಂಗಳೂರು ಚುನಾವಣೆ – ಡಾ. ದೀಪಕ್ ಶೆಟ್ಟರ ವಿರುದ್ಧ ಕಾಂತಿ ಶೆಟ್ಟಿ ಕಣಕ್ಕೆ?

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರು ಬಂಟರ ಸಂಘವು ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಸಮಾಜದ ಏಳಿಗೆಗಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಸಂಘದ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಳ್ಳಲಿದ್ದು, 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಶೀಘ್ರದಲ್ಲೇ ಚುನಾವಣೆ ನಡೆಯಲಿರುವುದು ಸಂಘದ ಸದಸ್ಯರ ಗಮನ ಸೆಳೆದಿದೆ. ಈ ಬಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಘಟಾನುಘಟಿಗಳು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವುದು ತಿಳಿದುಬಂದಿದೆ. ಈಗಾಗಲೇ

Scroll to Top