Author name: Bunts World

Buntara Sangha Bangalore Election - Kanti Shetty to contest against Dr Deepak Shetty

ಬಂಟರ ಸಂಘ ಬೆಂಗಳೂರು ಚುನಾವಣೆ – ಡಾ. ದೀಪಕ್ ಶೆಟ್ಟರ ವಿರುದ್ಧ ಕಾಂತಿ ಶೆಟ್ಟಿ ಕಣಕ್ಕೆ?

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರು ಬಂಟರ ಸಂಘವು ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಸಮಾಜದ ಏಳಿಗೆಗಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಸಂಘದ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಳ್ಳಲಿದ್ದು, 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಶೀಘ್ರದಲ್ಲೇ ಚುನಾವಣೆ ನಡೆಯಲಿರುವುದು ಸಂಘದ ಸದಸ್ಯರ ಗಮನ ಸೆಳೆದಿದೆ. ಈ ಬಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಘಟಾನುಘಟಿಗಳು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವುದು ತಿಳಿದುಬಂದಿದೆ. ಈಗಾಗಲೇ […]

Bunts sangha banglore yaksha sambhrama programme

ಬಂಟರ ಸಂಘ ಬೆಂಗಳೂರಿನಲ್ಲಿ ‘ಯಕ್ಷ ಸಂಭ್ರಮ’ – ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಇಂದು

ಬೆಂಗಳೂರು: ಬಂಟರ ಸಂಘ ಬೆಂಗಳೂರು ಹಾಗೂ ಯಕ್ಷಗಾನ ಮತ್ತು ರಂಗ ತರಬೇತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಯಕ್ಷ ಸಂಭ್ರಮ” ಕಾರ್ಯಕ್ರಮದ ಅಂಗವಾಗಿ ತೆಂಕು-ಬಡಗಿನ ಅದ್ದೂರಿ ಯಕ್ಷಗಾನ “ಶ್ರೀ ದೇವಿ ಮಹಾತ್ಮೆ” ಇಂದು (ಜೂನ್ 06, ಶನಿವಾರ) ಮಧ್ಯಾಹ್ನ 3 ಗಂಟೆಯಿಂದ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಈ ವಿಶೇಷ ಯಕ್ಷಗಾನ ಪ್ರದರ್ಶನದಲ್ಲಿ ಖ್ಯಾತ ಕಲಾವಿದರಾದ ಜನ್ಸಾಲೆ, ಸುರೇಶ ಶೆಟ್ಟಿ, ಕಾವ್ಯಶ್ರೀ, ಪೆರ್ಮುದೆ, ಐರಬೈಲ್, ಯಳಬೇರು, ಬಡಬಾಳ್, ಹಕ್ಲಾಡಿ, ನಿತೀನ್, ಪೆರ್ಲ ಹಾಗೂ ಗಜಗಟ್ಟಿ ಸೇರಿದಂತೆ ಹಲವು

Doctorate to Sukhananda Shetty for his thesis Kollur as a Cultural Study

‘ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾಪ್ರಬಂಧಕ್ಕೆ ಸುಖಾನಂದ ಶೆಟ್ಟಿಯವರಿಗೆ ಡಾಕ್ಟರೇಟ್.

ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ಭಂಡಾರ್‌ಕಾರ್ಸ್‌ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಸುಖಾನಂದ ಶೆಟ್ಟಿ ಅಂಪಾರು ಅವರು ಸಲ್ಲಿಸಿದ ‘ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ’ (A Cultural Study in Kolluru) ಮಹಾಪ್ರಬಂಧಕ್ಕೆ ಪ್ರತಿಷ್ಠಿತ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಹೆಸರಾಂತ ಲೇಖಕಿ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರೇಖಾ ಬನ್ನಾಡಿಯವರ ಮಾರ್ಗದರ್ಶನದಲ್ಲಿ, ಮಾಹೆಯ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಮೂಲಕ ಶ್ರೀಯುತರು ಈ ಸಂಶೋಧನಾ

Bangalore Bunts Sanghas social service work Free sewing machines for 46 people

ಬೆಂಗಳೂರು ಬಂಟರ ಸಂಘದ ಸಮಾಜಸೇವಾ ಕಾರ್ಯ: 46 ಮಂದಿಗೆ ಉಚಿತ ಹೊಲಿಗೆ ಯಂತ್ರ

ಬೆಂಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಹಾಗೂ ಸೇವಾದಳದ ವತಿಯಿಂದ ಆಯೋಜಿಸಲಾದ “ಸೇವಾ ಸಮಾಗಮ” ಕಾರ್ಯಕ್ರಮದಲ್ಲಿ ಸುಮಾರು 46 ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಆರ್ಥಿಕವಾಗಿ ಸಬಲರಾಗಲು ಇಂತಹ ಸಮಾಜಮುಖಿ ಯೋಜನೆಗಳು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಸಮಾಜದ ಅಗತ್ಯವಿರುವ ವರ್ಗಗಳಿಗೆ ನೆರವು ನೀಡುವ ಉದ್ದೇಶದಿಂದ ಬೆಂಗಳೂರು ಬಂಟರ ಸಂಘವು ನಿರಂತರವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು. Also Read: ದಿ. ಕಾಶಿ

Free uniforms distributed to 60 students of Devanari Bangadi School in memory of Kashi Shetty

ದಿ. ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಪ್ರಸಿದ್ಧ ಸಮಾಜಸೇವಕ ಹಾಗೂ ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಅವರ ವತಿಯಿಂದ ದೇವನಾರಿ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ (ಟಿ-ಶರ್ಟ್ ಮತ್ತು ಪ್ಯಾಂಟ್) ವಿತರಿಸಲಾಯಿತು. ತಮ್ಮ ಪ್ರೀತಿಯ ತಾಯಿ ದಿವಂಗತ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ ಶಶಿಧರ್ ಶೆಟ್ಟಿ ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೂನಿಫಾರ್ಮ್‌ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಉದ್ಯಮಿಯ ಈ ಸಮಾಜಮುಖಿ ಕಾರ್ಯವು ವಿದ್ಯಾರ್ಥಿಗಳಲ್ಲಿ ಹರ್ಷ ಮೂಡಿಸಿದೆ.

Kundapuras boy Advanced Achievement Rithin Shetty secures 1005th rank in the country in JEE exam

ಕುಂದಾಪುರದ ಹೈದನ ‘ಅಡ್ವಾನ್ಸ್ಡ್’ ಸಾಧನೆ: JEE ಪರೀಕ್ಷೆಯಲ್ಲಿ ದೇಶಕ್ಕೆ 1005ನೇ ರ್ಯಾಂಕ್ ಪಡೆದ ರಿತಿನ್ ಶೆಟ್ಟಿ

ಕುಂದಾಪುರ: ಕಠಿಣ ಪರಿಶ್ರಮ ಮತ್ತು ಅಚಲ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಕುಂದಾಪುರದ ಮಾಣಿಗರಡಿಯ ತರುಣ ರಿತಿನ್ ಶೆಟ್ಟಿ ಸಾಬೀತುಪಡಿಸಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಯುವ JEE Advanced ಪರೀಕ್ಷೆಯಲ್ಲಿ ರಿತಿನ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 1005ನೇ ರ್ಯಾಂಕ್ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಕುಂದಾಪುರ ಟು ತೆಲಂಗಾಣ: ರಿತಿನ್ ಶೆಟ್ಟಿ ಸಾಧನೆಯ ಹಾದಿ ಮಾಣಿಗರಡಿಯ ಎಂ. ಸತೀಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಸುಪುತ್ರನಾದ ರಿತಿನ್ ಶೆಟ್ಟಿ,

Scroll to Top