ನಮ್ಮ ಸಾಧಕರು

CA Final Pass in First Attempt Dr B B Hegde Colleges Shravya Shettys Achievement

ಚೊಚ್ಚಲ ಪ್ರಯತ್ನದಲ್ಲೇ ಸಿ.ಎ. ಫೈನಲ್ ಪಾಸ್: ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯ ಶೆಟ್ಟಿ ಸಾಧನೆ

ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ 2026ರ ಚಾರ್ಟರ್ಡ್ ಅಕೌಂಟೆನ್ಸಿ (ಸಿ.ಎ.) ಫೈನಲ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲೇ ಸಿ.ಎ. ಕೋರ್ಸ್‌ನ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿ.ಎ. ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವ ಶ್ರಾವ್ಯ ಅವರ […]

The Path of Achievement of Prof Dr Kothadi Umesh Shetty

ಶೈಕ್ಷಣಿಕ ಕ್ರಾಂತಿಯ ಹರಿಕಾರ: ಪ್ರೊ| ಡಾ| ಕೊತ್ತಾಡಿ ಉಮೇಶ್ ಶೆಟ್ಟಿ ಅವರ ಸಾಧನೆಯ ಪಥ

ಕುಂದಾಪುರ: ಗ್ರಾಮೀಣ ಭಾಗದ ಹಿನ್ನೆಲೆಯಿಂದ ಬಂದು, ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ನಿರಂತರ ಸೇವೆ ಸಲ್ಲಿಸಿ, ಇಂದು ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ಯಶಸ್ಸಿನ ಉತ್ತುಂಗಕ್ಕೆ ಮುನ್ನಡೆಸುತ್ತಿರುವ ಹೆಗ್ಗಳಿಕೆ ಪ್ರಾಂಶುಪಾಲರಾದ ಪ್ರೊ| ಡಾ| ಕೊತ್ತಾಡಿ ಉಮೇಶ್ ಶೆಟ್ಟಿ ಅವರದ್ದಾಗಿದೆ. ಕೇವಲ ಬೋಧನೆಗಷ್ಟೇ ಸೀಮಿತವಾಗದೆ ಉತ್ತಮ ಸಂಶೋಧಕರಾಗಿ, ಪಠ್ಯಪುಸ್ತಕಗಳ ಲೇಖಕರಾಗಿ ಹಾಗೂ ಯಶಸ್ವಿ ಆಡಳಿತಗಾರರಾಗಿ ಅವರು ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಡಾಕ್ಟರೇಟ್‌ವರೆಗೆ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ

KCET Results Students of Sujnan Educational Trust Kundapur achieve excellent results at the state level

ಕೆ.ಸಿ.ಇ.ಟಿ ಫಲಿತಾಂಶ: ಕುಂದಾಪುರದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನ ವಿದ್ಯಾರ್ಥಿಗಳಿಂದ ರಾಜ್ಯಮಟ್ಟದಲ್ಲಿ ಶ್ರೇಷ್ಠ ಸಾಧನೆ

ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಜ್ಯಮಟ್ಟದ ಕೆ.ಸಿ.ಇ.ಟಿ (KCET) ಪರೀಕ್ಷೆಯಲ್ಲಿ ಕುಂದಾಪುರದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಏಪ್ರಿಲ್ 23 ಮತ್ತು 24 ರಂದು ನಡೆದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯಲ್ಲಿ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಜ್ಞಾನ ನೀಟ್‌ ಅಕಾಡೆಮಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Unprecedented achievement of a student from Barkur in the 2025-26 CET exam

2025-26ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಬಾರ್ಕೂರಿನ ವಿದ್ಯಾರ್ಥಿಯ ಅಭೂತಪೂರ್ವ ಸಾಧನೆ

2025-26ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಬಾರ್ಕೂರಿನ ಪ್ರತಿಭಾವಂತ ವಿದ್ಯಾರ್ಥಿ ಸಾರ್ಥಕ್ ಆರ್. ಶೆಟ್ಟಿ ಅವರು ರಾಜ್ಯ ಮಟ್ಟದಲ್ಲಿ 26ನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಸಾರ್ಥಕ್ ಅವರು ಬಾರ್ಕೂರಿನ ಶಿಕ್ಷಕ ದಂಪತಿಗಳಾದ ಶ್ರೀಮತಿ ವನಜ ಶೆಟ್ಟಿ ಹಾಗೂ ಶ್ರೀ ಹಿಮಕರ ಶೆಟ್ಟಿ ಅವರ ಮೊಮ್ಮಗರಾಗಿದ್ದು, ಶ್ರೀಮತಿ ದೀಪ್ತಿ ಆರ್. ಶೆಟ್ಟಿ ಮತ್ತು ಶ್ರೀರಾಮಕೃಷ್ಣ ಶೆಟ್ಟಿ ಅವರ ಪುತ್ರ ಹಾಗೂ ದೀಪಕ್ ಶೆಟ್ಟಿ ಅವರ ಅಳಿಯರಾಗಿದ್ದಾರೆ. ಸಿಇಟಿ

Kundapuras boy Advanced Achievement Rithin Shetty secures 1005th rank in the country in JEE exam

ಕುಂದಾಪುರದ ಹೈದನ ‘ಅಡ್ವಾನ್ಸ್ಡ್’ ಸಾಧನೆ: JEE ಪರೀಕ್ಷೆಯಲ್ಲಿ ದೇಶಕ್ಕೆ 1005ನೇ ರ್ಯಾಂಕ್ ಪಡೆದ ರಿತಿನ್ ಶೆಟ್ಟಿ

ಕುಂದಾಪುರ: ಕಠಿಣ ಪರಿಶ್ರಮ ಮತ್ತು ಅಚಲ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಕುಂದಾಪುರದ ಮಾಣಿಗರಡಿಯ ತರುಣ ರಿತಿನ್ ಶೆಟ್ಟಿ ಸಾಬೀತುಪಡಿಸಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಯುವ JEE Advanced ಪರೀಕ್ಷೆಯಲ್ಲಿ ರಿತಿನ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 1005ನೇ ರ್ಯಾಂಕ್ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಕುಂದಾಪುರ ಟು ತೆಲಂಗಾಣ: ರಿತಿನ್ ಶೆಟ್ಟಿ ಸಾಧನೆಯ ಹಾದಿ ಮಾಣಿಗರಡಿಯ ಎಂ. ಸತೀಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಸುಪುತ್ರನಾದ ರಿತಿನ್ ಶೆಟ್ಟಿ,

Scroll to Top