ಮಂತ್ರಾಲಯ ಬಳಿ ಭೀಕರ ಕಾರು ಅಪಘಾತ: ಮಂಗಳೂರು ಹಾಪ್ಕಾಮ್ಸ್ ಜಿಎಂ ರವಿಶೆಟ್ಟಿ ದಾರುಣ ಸಾವು; ಮೂವರಿಗೆ ಗಂಭೀರ ಗಾಯ
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (43) ಅವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಅವರ ಮೂವರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಮಂಗಳವಾರ ನಸುಕಿನಜಾವ ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ನಡೆದಿದೆ. ಮಂಗಳೂರಿನಿಂದ ರವಿಶೆಟ್ಟಿ ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಕಾರಿನಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ, […]









