ಮಕ್ಕಳಿಗೆ ಸಂಘದ ಪರಂಪರೆ ಪರಿಚಯಿಸಿ, ಸೇವಾ ಮನೋಭಾವ ಬೆಳೆಸಿ: ಪ್ರವೀಣ್ ಭೋಜ ಶೆಟ್ಟಿ
ಮುಂಬಯಿ: ಮಕ್ಕಳು ಬಂಟರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರತೀ ಬಾರಿ ಭಾಗವಹಿಸಲು ಸಾಧ್ಯವಾಗದಿದ್ದರೂ, ಪಾಲಕರು ಅವರಿಗೆ ಶಿಕ್ಷಣದ ಜೊತೆಗೆ ಸಂಘದ ಚಟುವಟಿಕೆಗಳು, ಸೇವಾ ಕಾರ್ಯಗಳು ಹಾಗೂ ಸಂಘದ ಉದ್ದೇಶಗಳ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ಭವಿಷ್ಯದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ಸಮಾಜ ಸೇವೆಗೆ ಕೈಜೋಡಿಸಲು ಸಾಧ್ಯವಾಗುತ್ತದೆ ಎಂದು ಶತಮಾನದತ್ತ ಸಾಗುತ್ತಿರುವ ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಹೇಳಿದರು. ಜೂನ್ 28ರಂದು ನಾಲಾಸೋಪಾರ ಪಶ್ಚಿಮದ ಗ್ಯಾಲಕ್ಸಿ ಹೋಟೆಲ್ ಸಭಾಂಗಣದಲ್ಲಿ […]









